Friday, April 18, 2025
Google search engine

Homeಅಪರಾಧರೇವ್ ಪಾರ್ಟಿ: ಕರ್ತವ್ಯಲೋಪ ಆರೋಪದಡಿ PSI ಅಮಾನತು

ರೇವ್ ಪಾರ್ಟಿ: ಕರ್ತವ್ಯಲೋಪ ಆರೋಪದಡಿ PSI ಅಮಾನತು

ಮೈಸೂರು: ಇಲವಾಲ ಠಾಣೆ ವ್ಯಾಪ್ತಿಯಲ್ಲಿ ಸೆ. 28ರಂದು ಮೈಸೂರು ತಾಲೂಕಿನ ಮೀನಾಕ್ಷಿಪುರದ ಬಳಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಪಾರ್ಟಿ ಮೇಲೆ ದಾಳಿ ಮಾಡಿದ್ದ ಮೈಸೂರು ತಾಲೂಕಿನ ಇಲವಾಲ ಠಾಣೆ PSI ಮಂಜುನಾಥ ನಾಯಕ್​ರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಿ ಎಸ್​ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.

ಅದ್ಧೂರಿ ಪಾರ್ಟಿಯಲ್ಲಿ ಯುವಕರು, ಯುವತಿಯರು ಭಾಗಿಯಾಗಿದ್ದರು. ದಾಳಿ ವೇಳೆ ಪಿಎಸ್​​ಐ ಮೇಲೆ ಹಲ್ಲೆ ನಡೆಸಿ ಯುವಕರು ಪರಾರಿಯಾಗಿದ್ದರು. ನಂತರ ಮಂಜುನಾಥ ನಾಯಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ದಿಢೀರ್ ಆಗಿ ಅಮಾನತು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಮಂಜುನಾಥ ನಾಯಕ್ ಆಸ್ಪತ್ರೆಗೆ ದಾಖಲಾದ ನಂತರ ಎಎಸ್​ಪಿ ನಾಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಯುವಕರು, ಯುವತಿಯರನ್ನು ವಶಕ್ಕೆ ಪಡೆದು 64 ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಪಾರ್ಟಿ ಆಯೋಜಿಸಿದ್ದ ಐವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿತ್ತು. ಉಳಿದವರಿಗೆ ನೋಟಿಸ್ ನೀಡಿಲಾಗಿತ್ತು.

ಸದ್ಯ ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು ಮಾದಕ ದ್ರವ್ಯ ಸಿಕ್ಕಿಲ್ಲ. ವಿವಿಧ ಮಾದರಿಯ ಬಿಯರ್ ಬಾಟಲ್​ಗಳು, ಮದ್ಯ, ಸಿಗರೇಟ್ ಪತ್ತೆಯಾಗಿವೆ. ಕೆಲವರು ಕಾರುಗಳನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ವಶಕ್ಕೆ ಪಡೆದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳುಹಿಸಿದ್ದಾರೆ. ಎಫ್ಎಸ್ಎಲ್ ವರದಿ ಬಳಿಕ ಗಾಂಜಾ ಸೇವನೆ ಬಗ್ಗೆ ಸ್ಪಷ್ಟತೆ ಸಿಗಲಿದೆ.

RELATED ARTICLES
- Advertisment -
Google search engine

Most Popular