Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಬೆಂಗಳೂರು: ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯನ್ನು ಇಂದಿನಿಂದ ಬದಲಾವಣೆ ಮಾಡಲಾಗಿದ್ದು, ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇಂದಿನಿಂದ ಎಸಿಪಿ ಚಂದನ್ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿಯಲಿದೆ.

RELATED ARTICLES
- Advertisment -
Google search engine

Most Popular