Monday, April 21, 2025
Google search engine

Homeಅಪರಾಧರೇಣುಕಾಸ್ವಾಮಿ ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್

ರೇಣುಕಾಸ್ವಾಮಿ ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಗೆ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಅದರ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗೊಂಡು ಅಂಗಾತ ಮಲಗಿರುವ ಫೋಟೊಗಳು ಲಭ್ಯವಾಗಿವೆ.

ಪಟ್ಟಣಗೆರೆ ಶೆಡ್ ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೊ ಇದಾಗಿದೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.

RELATED ARTICLES
- Advertisment -
Google search engine

Most Popular