ಮಂಡ್ಯ : ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುವಂತೆ ಕಾಲಭೈರವನಲ್ಲಿ ಕೋರಿದ್ದೇನೆ ಎಂದು ಆದಿಚುಂಚನಗಿರಿಯಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ . ಕಾಲಭೈರವನ ದರ್ಶನ ಮಾಡಿ ಶ್ರೀ ಆಶೀರ್ವಾದ ಪಡೆದಿದ್ದೇನೆ.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ- ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ,ಸರ್ಕಾರದ ದುರಾಡಳಿತದ ವಿರುದ್ಧ ಜನರೆ ದಂಗೆ ಏಳಬೇಕು. ಜನರು ಪ್ರತಿಭಟಿಸುವ ಮೂಲಕ ಸರ್ಕಾರ ಎಚ್ಚರಿಸುವ ಕೆಲಸ ಮಾಡಬೇಕು. ಗ್ಯಾರಂಟಿ ಮುಂದುವರೆಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೆ ಒಪ್ಪಿಕೊಂಡಿದ್ದಾರೆ.
ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಮುಂದಾಗಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಎಂಬ ಗಾದೆ ಇದ್ಯಲ್ಲ ಹಾಗೇ ಆಯ್ತು ಎಂದು ಹೇಳಿದರು.
ಒಕ್ಕಲಿಗ ಸಮಾಜ ಹಾಗೂ ರಾಜ್ಯಕ್ಕೆ ಗೌರವ ತರುವಂತೆ ಕೆಲಸ ಮಾಡಲು ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಕೇಂದ್ರ ಸರ್ಕಾರದಲ್ಲಿ 2 ಕಠಿಣ ಇಲಾಖೆ ಸಿಕ್ಕಿದೆ. ರಾಜ್ಯಕ್ಕೆ ಉತ್ತಮ ಕೊಡುಗೆ ನೀಡವ ಅವಕಾಶವೂ ಸಿಕ್ಕಿದೆ ಎಂದರು.