Friday, April 11, 2025
Google search engine

Homeಅಪರಾಧದರೋಡೆಗೆ ಯತ್ನ: ಪೊಲೀಸರಿಂದ ಕಾಲಿಗೆ ಗುಂಡು ಹೊಡೆದು ಓರ್ವನ ಬಂಧನ

ದರೋಡೆಗೆ ಯತ್ನ: ಪೊಲೀಸರಿಂದ ಕಾಲಿಗೆ ಗುಂಡು ಹೊಡೆದು ಓರ್ವನ ಬಂಧನ

ಹುಬ್ಬಳ್ಳಿ: ದರೋಡೆಗೆ ಯತ್ನಿಸಿದ ತಂಡದ ಮೇಲೆ ಪೊಲೀಸರು ಗುಂಡಿನ‌ ದಾಳಿ‌ ನಡಸಿದ್ದು, ಒಬ್ಬ ದರೋಡಕೋರನ ಕಾಲಿಗೆ ಗುಂಡು ತಗುಲಿದ ಘಟನೆ ರೇವಡಿಹಾಳ ಸೇತುವೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಸೋಮವಾರ ಬೆಳಗಿನ‌ ಜಾವ 3:00 ಗಂಟೆ ಸುಮಾರಿಗೆ ಗೋಕುಲ ಗ್ರಾಮದಲ್ಲಿ 5-6 ಜನರ ತಂಡವು ರಜನಿಕಾಂತ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದೆ. ಈ ವೇಳೆ ಮನೆಯವರು ಎಚ್ಚರಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ ರೋಡ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದರೋಡೆಕೋರರನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾದಾಗ ಪಿಎಸ್‌ಐ ಸಚಿನ ದಾಸರೆಡ್ಡಿ ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ನಂತರ ಮಹೇಶ ಕಾಳೆ ಎಂಬ ದರೋಡೆಕೋರನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಇನ್ನುಳಿದ ದರೋಡೆಕೋರರು ತಲೆಮರೆಸಿಕೊಂಡು ಹೋಗಿದ್ದಾರೆ. ಈ ವೇಳೆ ಪಿಎಸ್ಐ ಸಚಿನ ದಾಸರೆಡ್ಡಿ ಮತ್ತು ಹೆಡ್ ಕಾನ್ಸಟೇಬಲ್ ವಸಂತ ಗುಡಗೇರಿ ಅವರು ಗಾಯಗೊಂಡಿದ್ದಾರೆ. ಗುಂಡೇಟು ತಿಂದ ದರೋಡೆಕೋರ ಮತ್ತು ಪೊಲೀಸರು ಸೇರಿ ಮೂವರು ಗಾಯಾಳುಗಳು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆಕೋರರ ತಂಡವು ಮನೆಗೆ ನುಗ್ಗುವ ಮುನ್ನ ಹಾಪ್ ಪ್ಯಾಂಟ್ ಧರಿಸಿ, ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ದರೋಡೆಗೆ ಹೊಂಚು ಹಾಕುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.

RELATED ARTICLES
- Advertisment -
Google search engine

Most Popular