ಹುಣಸೂರು, ಡಿ.16: ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಕೊಚ್ಚಿನ್ ಮತ್ತು ಮೈಸೂರು ವಿಭಾಗದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯ ವ್ಯಕ್ತಿಗಳಿಗೆ ಇಂದು ಸನ್ಮಾನ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮೈಸೂರು ವಿಭಾಗದಿಂದ ಸತ್ಯ ಎಂಎ ಎಸ್ ಫೌಂಡೇಶನ್ ನ ಅಧ್ಯಕ್ಷ ಸತ್ಯಪ್ಪ ರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಿದರು.