ಮಂಗಳೂರು (ದಕ್ಷಿಣ ಕನ್ನಡ) :ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಶೋಧ ನಡೆಸಿದ ವೇಳೆ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆ ತಿಮರೋಡಿ ಅವರ ಮನೆಗೆ ಮಹಜರು ನಡೆಸಲು ಹೋಗಿದ್ದರು ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಮನೆಯಲ್ಲಿರಲಿಲ್ಲ.
ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಸೆ.19 ರಂದು ಬೆಳಗ್ಗೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಈ ಹಿನ್ನಲೆಯಲ್ಲಿ ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅನ್ನು ಬೆಳ್ತಂಗಡಿ ಪೊಲೀಸರು ಅಂಟಿಸಿ ಬಂದಿದ್ದಾರೆ.