ಬೆಂಗಳೂರು : ಸಿದ್ದರಾಮಯ್ಯರು ಶೋಷಿತರು ಹಾಗೂ ಬಡವರ ಪಾಲಿನ ಧ್ವನಿಯಾಗಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮುಡಾದಲ್ಲಿ ೫೦-೫೦ರ ಅನುಪಾತದಲ್ಲಿ ನಿವೇಶನ ನೀಡುವ ನಿಯಮ ತಂದಿದ್ದೇ ಬಿಜೆಪಿಯ ಅಧಿಕಾರಾವಧಿಯಲ್ಲಿ. ಈ ನಿಯಮದ ಅನುಸಾರ ಸಿದ್ದರಾಮಯ್ಯರಿಗೆ ಬದಲಿ ನಿವೇಶನ ಕೊಟ್ಟಿದ್ದು ಕೂಡ ಬಿಜೆಪಿ ಅಧಿಕಾರಾವಧಿಯಲ್ಲಿ. ಈಗ ಸಿದ್ದರಾಮಯ್ಯ ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಎಂದು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಯವರಿಗೆ ಮತಿಭ್ರಮಣೆಯಾಗಿದೆ ಎಂದು ಭಾವಿಸಬೇಕೋ ಅಥವಾ ಅವರ ಹುಚ್ಚು ಅತಿರೇಕಕ್ಕೆ ಹೋಗಿದೆ ಎಂದು ತಿಳಿಯಬೇಕೋ.
ಜೆಡಿಎಸ್ ನಾಯಕ ಕುಮಾರಸ್ವಾಮಿ ಕೂಡ ಮುಡಾದಿಂದ ಕೈಗಾರಿಕಾ ನಿವೇಶನ ಪಡೆದಿದ್ದಾರೆ. ಬಿಜೆಪಿಯ ಹಲವು ನಾಯಕರ ಬಳಿ ಮುಡಾ ನಿವೇಶನಗಳಿವೆ. ಹೀಗಿರುವಾಗ ಸಿದ್ದರಾಮಯ್ಯ ಮಾತ್ರ ವಿಪಕ್ಷಗಳ ಟಾರ್ಗೆಟ್ ಯಾಕೆ. ಸಿದ್ದರಾಮಯ್ಯರು ಶೋಷಿತರು ಹಾಗೂ ಬಡವರ ಪಾಲಿನ ಧ್ವನಿಯಾಗಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ. ಎಂದು ಪ್ರಶ್ನಿಸಿದ್ದಾರೆ.