Tuesday, June 16, 2026
Google search engine

Homeಸ್ಥಳೀಯಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ ಎಸ್ ಐಟಿ ಎಸ್.ಪಿ ಕಾರು ಪಲ್ಟಿ

ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ ಎಸ್ ಐಟಿ ಎಸ್.ಪಿ ಕಾರು ಪಲ್ಟಿ

ಮಂಗಳೂರು : ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಎಸ್ ಪಿ ಸೈಮನ್ ಅವರು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ಚರ್ಚಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಕಾರು ಪಲ್ಟಿ ಸಂಬಂಧ ಎಸ್ ಪಿ ಸೈಮನ್ ಅವರು  ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular