Saturday, February 21, 2026
Google search engine

Homeರಾಜ್ಯಸ್ನೇಹಮಯಿ ಕೃಷ್ಣ ಪೊಲೀಸರ ವಶ : ಸರ್ಕಾರದ ವಿರುದ್ಧ ಸ್ನೇಹಮಯಿ ಕೃಷ್ಣ ಪುತ್ರ ಕಿಡಿ

ಸ್ನೇಹಮಯಿ ಕೃಷ್ಣ ಪೊಲೀಸರ ವಶ : ಸರ್ಕಾರದ ವಿರುದ್ಧ ಸ್ನೇಹಮಯಿ ಕೃಷ್ಣ ಪುತ್ರ ಕಿಡಿ

ಮೈಸೂರು : ಮುಡಾ ಹಗರಣ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಕೆಲವೇ ಗಂಟೆಗಳ ಮುನ್ನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಸ್ನೇಹಮಯಿ ಕೃಷ್ಣ ಪುತ್ರ ಕಿಡಿಕಾರಿದ್ದಾರೆ.

ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ನಟೇಶ್ ನೀಡಿದ ದೂರಿನ ಅನ್ವಯ ಸೈಬರ್ ಕ್ರೈಮ್ ಪೊಲೀಸರು ಸ್ನೇಹಮಯಿ ಕೃಷ್ಣರನ್ನು ಬಂಧನಕ್ಕೊಳಪಡಿಸಿದ್ದಾರೆ.

ಇನ್ನೂ ಈ ನಡುವೆ ಮುಡಾ ಕೇಸ್ ವಿಚಾರಣೆ ಸಂಬಂಧ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಕೋರ್ಟ್‌ಗೆ ಹಾಜರಾಗಬೇಕಿತ್ತು. ಆದರೆ, ಪೊಲೀಸರಿಂದ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಬದಲು ಅವರ ಮಗ ಕೋರ್ಟ್‌ಗೆ ಹಾಜರಾಗಿದ್ದರು ಎನ್ನಲಾಗಿದ್ದು, ಕೋರ್ಟ್ ಕಲಾಪದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸ್ನೇಹಮಯಿ ಕೃಷ್ಣ ಅವರ ಪುತ್ರ ವಿವೇಕ್ ಅವರು, ಸಿಸಿಬಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ ಎಂದು ನಮಗೆ ತಿಳಿಸಿದ್ದರೂ ಆದರೆ, ಸಿಸಿಬಿ ಕಚೇರಿಗೆ ಹೋದಾಗ ಅವರು ಅಲ್ಲಿಲ್ಲ ಎಂದು ಹೇಳಿದರು.

ಅವರನ್ನು ಅನಾಮಧೇಯ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆಯೆಂಬ ಆತಂಕವಿದ್ದು, ನನ್ನ ತಂದೆಗೆ ಏನಾದರೂ ಆಗಿದ್ದರೆ ರಾಜ್ಯ ಸರ್ಕಾರವೇ ಹೊಣೆ ಎಂದಿದ್ದಾರೆ. ಅಲ್ಲದೆ ನ್ಯಾಯಾಲಯದಲ್ಲಿ ಸಾಕ್ಷ್ಯ ಮತ್ತು ವಾದ ಮಂಡಿಸದಂತೆ ತಡೆಯಲು ಬಂಧನಕ್ಕೊಳಪಡಿಸಿದ್ದಾರೆ. ಸಾಕ್ಷ್ಯ ನೀಡಬಹುದು ಎಂಬ ಭಯದಿಂದ ಮಧ್ಯಾಹ್ನದ ವಿಚಾರಣೆಗೂ ಮೊದಲು ಬಂಧಿಸಿದ್ದಾರೆ. ಇದು ಅವರನ್ನು ಮೌನಗೊಳಿಸುವ ಪ್ರಯತ್ನ, ಬಂಧನ ಸಂಬಂಧ ಎಫ್‌ಐಆರ್ ಪ್ರತಿ ಅಥವಾ ಪ್ರಕರಣದ ವಿವರವನ್ನು ಕುಟುಂಬಕ್ಕೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೆ ಇತ್ತೀಚೆಗೆ ಹಗರಣ ಪ್ರಕರಣ ಸಂಬಂಧ ಆಡಿಯೋ ಕ್ಲಿಪ್ ಮತ್ತು ಸಾಕ್ಷ್ಯ ಬಿಡುಗಡೆ ಮಾಡಿದ್ದರು. ಮುಡಾ ಪ್ರಕರಣ ಹಿಂಬಾಲಿಸಿದ್ದಕ್ಕಾಗಿ ಮತ್ತು ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಆರೋಪ ಮಾಡಿದ್ದರಿಂದ ತಂದೆಗೆ ಒತ್ತಡವಿತ್ತು ಎಂಬುದಾಗಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular