ಮಂಗಳೂರು (ದಕ್ಷಿಣ ಕನ್ನಡ): ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕೋಮು ದ್ವೇಷಕ್ಕೆ ಬಲಿಯಾದ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಮನೆಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ರಹ್ಮಾನ್ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವ ಬಗ್ಗೆ ತಿಳಿಸಿದ ಯುಟಿ ಖಾದರ್ ಅವರು, ನಿಮ್ಮ ಸಂಕಷ್ಟದ ಹಾಗೂ ನೋವಿನ ಸಮಯದಲ್ಲಿ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆಯನ್ನು ನೀಡಿದರು.