Sunday, April 20, 2025
Google search engine

Homeರಾಜ್ಯನಿಖಿಲ್ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ: ಜಿ.ಟಿ.ದೇವೇಗೌಡ

ನಿಖಿಲ್ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ: ಜಿ.ಟಿ.ದೇವೇಗೌಡ

ಹಾಸನ: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ನನಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.

ಕುಟುಂಬ ಸಮೇತರಾಗಿ ಆಗಮಿಸಿಹಾಸನಾಂಬೆ ದೇವಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ತುಂಬಾ ಬ್ಯುಸಿಯಾಗಿದ್ದೇನೆ, ಹಾಗಾಗಿ ನಾನು ಯಾವುದೇ ಚುನಾವಣೆಗೆ ಹೋಗಿಲ್ಲ. ಚನ್ನಪಟ್ಟಣ ಚುನಾವಣೆ ಬಗ್ಗೆ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ.


ಕ್ಷೇತ್ರದಲ್ಲಿ ಕೆಲಸಗಳ ಒತ್ತಡದಲ್ಲಿ ಇದ್ದೇನೆ. ಮುಂದೆ ನೋಡೋಣ. ಚನ್ನಪಟ್ಟಣ ಚುನಾವಣೆ ಬಗ್ಗೆ ಮಾಹಿತಿ ಪಡೆದಿಲ್ಲ, ಅದರ ಬಗ್ಗೆ ನಾನು ಮಾತನಾಡಲ್ಲ. ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular