ದಾವಣಗೆರೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಯಾವುದೇ ಅಪಘಾತಗಳು ಸಂಭವಿಸದಂತೆ ಹಸಿರು ಪಟಾಕಿಗಳನ್ನು ಬಳಸಿ ಪರಿಸರ ಸ್ನೇಹಿಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ ಎಂ.ವಿ ಮಾಹಿತಿ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೀಪಾವಳಿ ನಿಮಿತ್ತ ನಡೆದ ಪಟಾಕಿ ಮಾರಾಟದ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ಜನರು ಸಂಭ್ರಮದಿಂದ ಹಬ್ಬವನ್ನು ಆಚರಿಸಬೇಕು. ಈ ಹಬ್ಬದಲ್ಲಿ ಹೆಚ್ಚು ಸದ್ದು ಮಾಡುವ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ಪರವಾನಗಿ ಪಡೆದು ನಿಗದಿತ ಜಾಗದಲ್ಲಿ ಮಾರಾಟ ಮಾಡುವಂತೆ ಸೂಚನೆ ನೀಡಿದರು. ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ತಂಡ ರಚಿಸಿ ವರದಿ ನೀಡಿದ ಸ್ಥಳ ಗುರುತಿಸಿ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ದಾವಣಗೆರೆ ನಗರ ಸ್ಮಾರ್ಟ್ ಸಿಟಿ ಆಗಿದ್ದು ಈ ಹಿಂದೆ ಹೈಸ್ಕೂಲ್ ಮೈದಾನದಲ್ಲಿ ಮಾರಾಟ ಮಾಡಲು ಅವಕಾಶ ನೀಡಲಾಗಿತ್ತು.
ನವೆಂಬರ್ 9 ರಿಂದ 15 ರವರೆಗೆ ಪಟಾಕಿಗಳನ್ನು ಮಾರಾಟ ಮಾಡಲು ಪರವಾನಗಿಗಳನ್ನು ನಿಗದಿತ ಸ್ಥಳದಲ್ಲಿ ಮಾರಾಟ ಮಾಡಲು ಮಾತ್ರ ಅನುಮತಿಸಲಾಗಿದೆ, ಸುರಕ್ಷತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಪಟಾಕಿ ಮಾರಾಟ ಮಳಿಗೆಯನ್ನು 10-10 ಅಳತೆಯಲ್ಲಿ ನಿರ್ಮಿಸಬೇಕು ಮತ್ತು ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.
ಜನವಸತಿ ಇರುವ ಪ್ರದೇಶಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಬಾರದು. ಹಬ್ಬದ ಹಬ್ಬಗಳ ಸಂದರ್ಭದಲ್ಲಿ ವಿವಿಧ ರೀತಿಯ ಪಟಾಕಿಗಳಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವು ಸಾರ್ವಜನಿಕ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಹಸಿರು ಪಟಾಕಿಗಳನ್ನು ಪ್ರೋತ್ಸಾಹಿಸಲಾಗಿದೆ. ಜಿಲ್ಲಾ ಪೊಲೀಸ್ ಉಪ ಅಧಿಕಾರಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಮನಿ ತಿಮ್ಮಣ್ಣ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಮಲ್ಲಾನಾಯ್ಕ್, ದಾವಣಗೆರೆ ತಾಲೂಕು ತಹಸೀಲ್ದಾರ್ ಡಾ.ಅಶ್ವತ್ ಎಂ.ಜಯಲಕ್ಷ್ಮೀಬಾಯಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ಆರ್, ಪರಿಸರ ಅಧಿಕಾರಿ ಲಕ್ಷ್ಮೀಕಾಂತ್ ಹಾಗೂ ಪಟಾಕಿ ಮಾರಾಟಗಾರರು ಉಪಸ್ಥಿತರಿದ್ದರು