Tuesday, June 3, 2025
Google search engine

Homeರಾಜ್ಯಸುದ್ದಿಜಾಲSKSSF ಜಿಲ್ಲಾ ಸಮಿತಿಯಿಂದ ಘೋರ ಖಂಡನೆ: ಹತ್ಯೆ ಪ್ರಕರಣದ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

SKSSF ಜಿಲ್ಲಾ ಸಮಿತಿಯಿಂದ ಘೋರ ಖಂಡನೆ: ಹತ್ಯೆ ಪ್ರಕರಣದ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು (ದಕ್ಷಿಣ ಕನ್ನಡ ) : ಎಸ್ಕೆಎಸೆಸ್ಸೆಫ್ ಕಾರ್ಯಕರ್ತ ಮತ್ತು ಕೊಳತ್ತಮಜಲು ಮಸೀದಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಗೂ ಕುಡುಪುವಿನಲ್ಲಿ ಅಶ್ರಫ್‌ರನ್ನು ಹತ್ಯೆಗೈದ ಕೃತ್ಯವನ್ನು ಖಂಡಿಸಿ ಮತ್ತು ದ್ವೇಷ ಭಾಷಣಗಾರರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್ಕೆಎಸೆಸ್ಸೆಫ್ ವೆಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ನಡೆಯಿತು.


ಜಿಲ್ಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ಬಳಿಕ ಸಾಮಾನ್ಯ ವರ್ಗಾವಣೆ ಆರಂಭಗೊಂಡಿವೆ. ಈ ಸಾಮಾನ್ಯ ಪೊಲೀಸರನ್ನು ಜಿಲ್ಲೆಯೊಳಗೆ ವರ್ಗಾವಣೆಗೊಳಿಸಿದರೆ ಸಾಲದು. ಅವರನ್ನು ರಾಜ್ಯದ ಇತರ ಜಿಲ್ಲೆಗಳಿಗೆ ವರ್ಗಾಯಿಸಬೇಕು. ಇಲ್ಲದಿದ್ದರೆ ಈ ವರ್ಗಾವಣೆ ಪ್ರಕ್ರಿಯೆಗೆ ಅರ್ಥವಿಲ್ಲ. ದ್ವೇಷ ಭಾಷಣ ಯಾರೇ ಮಾಡಲಿ, ಅವರನ್ನು ಬಂಧಿಸಿ ಜೈಲಿಗೆ ಅಟ್ಟಿದರೆ ಇತರರಿಗೆ ಪಾಠವಾಗಲಿದೆ. ಅದರೊಂದಿಗೆ ಡ್ರಗ್ಸ್ ಜಾಲವನ್ನೂ ಮಟ್ಟಹಾಕಬೇಕು. ಹತ್ಯೆ ಆರೋಪಿಗಳಿಗೆ ಗರಿಷ್ಠ ಪ್ರಮಾಣದ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಸ್ಕೆಎಸೆಸ್ಸೆಫ್ ಮುಖಂಡ ಅಮೀರ್ ತಂಙಳ್ ಕಿನ್ಯ ಅಧ್ಯಕ್ಷತೆ ವಹಿಸಿದ್ದರು. ರಿಯಾಝ್ ರಹ್ಮಾನಿ ಉದ್ಘಾಟಿಸಿದರು. ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ದುಆಗೈದರು. ಮುಖಂಡರಾದ ಅನೀಸ್ ಕೌಸರಿ, ಇಕ್ಬಾಲ್ ಬಾಳಿಲ ಮುಖ್ಯ ಭಾಷಣಗೈದರು. ಇರ್ಶಾದ್ ದಾರಿಮಿ ಮಿತ್ತಬೈಲ್, ಕೊಲೆಯಾದ ಅಬ್ದುಲ್ ರಹ್ಮಾನ್‌ರ ಸಹೋದರ ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular