Thursday, May 8, 2025
Google search engine

Homeರಾಜ್ಯಸುದ್ದಿಜಾಲಭಾರತೀಯ ಸೇನೆಯ ಆಪರೇಷನ್ ಸಿಂಧೂರಗೆ ಬೆಂಬಲ: ಕುದ್ರೋಳಿ ದೇವಾಲಯದಲ್ಲಿ ವಿಶೇಷ ಪೂಜೆ

ಭಾರತೀಯ ಸೇನೆಯ ಆಪರೇಷನ್ ಸಿಂಧೂರಗೆ ಬೆಂಬಲ: ಕುದ್ರೋಳಿ ದೇವಾಲಯದಲ್ಲಿ ವಿಶೇಷ ಪೂಜೆ

ಮಂಗಳೂರು (ದಕ್ಷಿಣ ಕನ್ನಡ) : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಇಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಮೇ 07ರಂದು ಮುಂಜಾನೆ ಭಾರತವು ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ʼಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಅನುಗ್ರಹಿಸಲಿ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

RELATED ARTICLES
- Advertisment -
Google search engine

Most Popular