Friday, April 18, 2025
Google search engine

Homeಅಪರಾಧಸ್ಕೂಟರ್’ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

ಸ್ಕೂಟರ್’ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

ಮಂಗಳೂರು(ದಕ್ಷಿಣ ಕನ್ನಡ): ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್  ಸವಾರ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.

ಮೃತ ಸವಾರನನ್ನು ಶಿವಾನಂದ ಎಂದು ಗುರುತಿಸಲಾಗಿದೆ. ಶಿವಾನಂದ ಅವರು ಕೆಪಿಟಿಯಿಂದ ನಂತೂರು ಪದವು ರಸ್ತೆಯಾಗಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ.

ಇದರಿಂದ ಸ್ಕೂಟರ್ ಸವಾರಿ ಮಾಡುತ್ತಿದ್ದ ಶಿವಾನಂದರ ತಲೆಯ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿರುವ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular