ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಮಕ್ಕಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು. ಸಾಲಿಗ್ರಾಮ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಬ್ರೈಟ್ ರಾಯಲಿಸ್ಟ್ ಟ್ರಸ್ಟ್ ನ ಅಮರ ಜ್ಯೋತಿ ವಿದ್ಯಾ ಸಂಸ್ಥೆಯು ಆಯೋಜಿಸಿದ್ದ ಅಮರ ಜ್ಯೋತಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಒಂದು ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಅದನ್ನು ಮುನ್ನಡೆಸಿಕೊಂಡು ಹೋಗುವುದು ಬಹಳ ಕಷ್ಟದ ಕೆಲಸವಾಗಿದೆ. ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕರು ಶಾಲೆಗೆ ಬರುವ ವಿದ್ಯಾರ್ಥಿಗಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪುಗೊಳಿಸಬೇಕು. ಕಲಿಕೆಯ ಜೊತೆಗೆ ಇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂಸ್ಥೆಯು ನಿರಂತರ ಸಂಪರ್ಕದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕು. ಆ ಮೂಲಕ ಎಲ್ಲರ ಸಹಕಾರದೊಂದಿಗೆ ಸಂಸ್ಥೆಯನ್ನು ಗಟ್ಟಿಯಾಗಿ ಕಟ್ಟಿ ಬೆಳೆಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ನಂತರ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಯಿತು.
ಸಮಾರಂಭದಲ್ಲಿ ಪಾಂಡವಪುರ ವಿಜಯ ಕಾಲೇಜಿನ ಗೌರವ ಕಾರ್ಯದರ್ಶಿ ಬಸವರಾಜು, ಪ್ರಾಂಶುಪಾಲ ವೆಂಕಟೇಗೌಡ, ತಾ.ಪಂ. ಮಾಜಿ ಸದಸ್ಯ ಸಣ್ಣಪ್ಪ, ಗ್ರಾ.ಪಂ. ಅಧ್ಯಕ್ಷೆ ಮಣಿಲಾ ಮಂಜುನಾಥ್, ಮಾಜಿ ಅಧ್ಯಕ್ಷರಾದ ಹುಚ್ಚೇಗೌಡ, ತೇಜುಮೂರ್ತಿ, ಅಮರ ಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ವಿಕಾಸ್, ಉಪಾಧ್ಯಕ್ಷ ಡಿಶ್ ಮಂಜು, ಕಾರ್ಯದರ್ಶಿ ಕೆ.ಎನ್.ಸುನಿತವಿಕಾಸ್, ಟ್ರಸ್ಟಿಗಳಾದ ಮೀನಾಕ್ಷಿ ಗೋಪಾಲಸ್ವಾಮಿ, ರತ್ನನಾಗೇಂದ್ರ, ಲೀಲಾವತಿ ನಟರಾಜ್, ಶಿವಮ್ಮ ಶಿವೇಗೌಡ, ಗೋಪಾಲಸ್ವಾಮಿ, ಮುಖ್ಯ ಶಿಕ್ಷಕಿ ಎಂ.ನಂದಿನಿ, ಶಿಕ್ಷಕರುಗಳಾದ ಸೌಮ್ಯ, ಪೂರ್ಣಿಮಾ, ರಂಜಿನಿ, ಸುಮತಿ, ಸರಸ್ವತಿ, ಸಿಬ್ಬಂದಿಗಳಾದ ಮಂಜಯ್ಯ, ಚೆಲುವರಾಜು, ಆಶಾ, ಚಂದ್ರಿಕಾ, ಮುಖಂಡರುಗಳಾದ ಲೋಕೇಶ್, ರವಿ, ಮಂಜುನಾಥ್, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಹಲವರು ಹಾಜರಿದ್ದರು.