Sunday, June 22, 2025
Google search engine

Homeರಾಜ್ಯಸುದ್ದಿಜಾಲಜಾತಿಗಣತಿಗೆ ಶಿಕ್ಷಕರ ಬಳಕೆ ಮಾಡಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಜಾತಿಗಣತಿಗೆ ಶಿಕ್ಷಕರ ಬಳಕೆ ಮಾಡಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ (ಜಾತಿ ಗಣತಿ)ಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡದಿರಲು ನಿರ್ಧರಿಸಲಾಗಿದೆ. ಜಾತಿ ಗಣತಿ ನಡೆಸಲು ಹೊರಗುತ್ತಿಗೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜಾತಿ ಸಮೀಕ್ಷೆ ಕೆಲಸಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಾರಗಟ್ಟಲೆ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಪ್ರವಚನಕ್ಕೆ ತೊಂದರೆಯಾಗಲಿದೆ ಎಂದು ಈಗಾಗಲೇ ಸರ್ಕಾರಕ್ಕೆ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಶಿಕ್ಷಕರನ್ನು ಬಳಕೆ ಮಾಡುತ್ತಿಲ್ಲ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೇಶದ ಜನಾಭಿಪ್ರಾಯ ಹಾಗೂ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿ ಸಮೀಕ್ಷೆಗೆ ಮುಂದಾಗಿದೆ. ಬಿಜೆಪಿ ರಾಜಕೀಯ ಲಾಭದ ದೂರದೃಷ್ಟಿಯಿಟ್ಟುಕೊಂಡು ಈ ಸಮೀಕ್ಷೆ ನಡೆಸಲು ಮುಂದಾಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಸಂವಿಧಾನದತ್ತ ಅವಕಾಶಗಳು ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ದೊರಕಲಿ ಎಂಬ ಆಶಯದೊಂದಿಗೆ ಮತ್ತೊಮ್ಮೆ ಜಾತಿಗಣತಿಗೆ ಮುಂದಾಗಿದೆ. ಹೀಗಾಗಿ ರಾಜ್ಯದ ಜಾತಿಗಣತಿಯೇ ಹೆಚ್ಚು ನಿಖರ, ಸ್ಪಷ್ಟ ಹಾಗೂ ವಿಶ್ವಾಸಾರ್ಹ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಸಂವಿಧಾನ ಓದು ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರೂ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ  ಸಚಿವ ಮಧು ಬಂಗಾರಪ್ಪ, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸುಗಳ ವರದಿಯನ್ನು ಆದಷ್ಟೂ ಬೇಗನೇ ಸರ್ಕಾರಕ್ಕೆ ಸಲ್ಲಿಸುವಂತೆ ಮನವಿ ಮಾಡಿದರು.

ಶಿಕ್ಷಣ ಇಲಾಖೆಯಲ್ಲಿ ಸದ್ಯ 51 ಸಾವಿರ ಶಿಕ್ಷಕರ ಕೊರತೆ ಇದ್ದು, 18 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ ದೊರೆತಿದೆ. ಒಳಮೀಸಲಾತಿ ಹಂಚಿಕೆ ವರ್ಗೀಕರಣ ಕಾರ್ಯ ಪೂರ್ಣಗೊಂಡ ನಂತರ ನೇಮಕಾತಿಗೆ ಚಾಲನೆ ದೊರೆಯಲಿದೆ. ಸದ್ಯ ಅತಿಥಿ ಶಿಕ್ಷಕರ ನೇಮಕದ ಮೂಲಕ ಪಾಠ ಪ್ರವಚನ ನಡೆಯುತ್ತಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular