Friday, April 11, 2025
Google search engine

Homeರಾಜ್ಯಬೆಂಗಳೂರಲ್ಲಿ ಟೆಕ್ಕಿ ಆತ್ಮಹತ್ಯೆ ಕೇಸ್ : ಓರ್ವ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರಲ್ಲಿ ಟೆಕ್ಕಿ ಆತ್ಮಹತ್ಯೆ ಕೇಸ್ : ಓರ್ವ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು : ಕಳೆದ ಡಿಸೆಂಬರ್ 9 ರಂದು ಬೆಂಗಳೂರಿನ ಮಂಜುನಾಥ ಲೇಔಟ್ ನ ಫ್ಲಾಟ್ ನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಕೇಸ್ ಪ್ರಕರಣ ಸಂಬಂಧ ಓರ್ವ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಸುಶೀಲ್ ಗೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅತುಲ್ ಪತ್ನಿ ನಿಖಿತ ಸಿಂಘಾಣಿಯ, ತಾಯಿ ನಿಶಾ ಸಿಂಘಾಣಿಯ ನಿಖಿತಾ ಸಹೋದರ ಅನುರಾಗ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ಮತ್ತೊಬ್ಬ ಆರೋಪಿ ಸುಶೀಲ್ ಶೈಲ್ ಗೆ ಸದ್ಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಶೀಲಗೆ ಅಲಹಾಬಾದ್ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಸುಶೀಲ್ ಸಿಂಗಾಣಿಯ ಪರ ಮನೀಶ್ ತಿವಾರಿ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular