ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆ ಪ್ರಕರಣಗಳು ಆತಂಕ ಉಂಟುಮಾಡಿವೆ. ಈ ಹತ್ಯೆಗಳನ್ನು ತಡೆಯಲು ರಾಜ್ಯ ಗೃಹ ಇಲಾಖೆ ವಿಫಲವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಜಿಲ್ಲೆಯಲ್ಲಿ ಮುಸ್ಲಿಮರ ಕಡೆಗಣನೆಗೆ ಬೇಸತ್ತ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರೊಬ್ಬರು ರಾಜೀನಾಮೆ ನೀಡಿದ್ದಾರೆ.
ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗಿನ ಹಲವಾರು ಹುದ್ದೆಗಳಲ್ಲಿ ಇರುವ ಮುಸ್ಲಿಂ ಮುಖಂಡರು ಮತ್ತು ಕಾರ್ಯಕರ್ತರು ಶಾರೀರಿಕ ಹಾಗೂ ರಾಜಕೀಯ ಅಸಮಾಧಾನ ವ್ಯಕ್ತಪಡಿಸಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿದ್ದು, ಸಭೆಯಲ್ಲಿ ಮಾತಿನ ಚಕಮಕಿ ಕೂಡ ಉಂಟಾಯಿತು.