Saturday, April 19, 2025
Google search engine

Homeಅಪರಾಧಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ: ಶಾಲಾ ಬಾಲಕ ಮೃತ

ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ: ಶಾಲಾ ಬಾಲಕ ಮೃತ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕಳಾರ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಿಪಿನ್ ಮೃತಪಟ್ಟ ಬಾಲಕ. ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ.
ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸರಸ್ವತಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ಪಂಜ ಸಮೀಪದ ಪರಮೇಶ್ವರ ಎಂಬವರ ಅವಾಂತರಕ್ಕೆ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು ಮದ್ಯದ ಬಾಟಲಿ, ಸಿಗರೇಟ್ ಪ್ಯಾಕ್ ಗಳು ಕಾರಿನ ಸೀಟಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular