Tuesday, April 8, 2025
Google search engine

Homeಅಪರಾಧಕೇವಲ 20 ರೂ.ಗಾಗಿ ಬಾರ್ ಕ್ಯಾಷಿಯರ್​ ಗೆ ಚಾಕು ಇರಿದ ಕಿಡಿಗೇಡಿಗಳು

ಕೇವಲ 20 ರೂ.ಗಾಗಿ ಬಾರ್ ಕ್ಯಾಷಿಯರ್​ ಗೆ ಚಾಕು ಇರಿದ ಕಿಡಿಗೇಡಿಗಳು

ಬೆಂಗಳೂರು: ಕೇವಲ 20 ರೂಪಾಯಿಗೆ ಕಿಡಿಗೇಡಿಗಳು ಚಾಕು ಇರಿದಿರುವ ಘಟನೆ ವಿದ್ಯಾರಣ್ಯಪುರದ ಬಾರ್ ​ನಲ್ಲಿ ನಡೆದಿದೆ.

ಬಾರ್ ಕ್ಯಾಷಿಯರ್​ಗೆ ಚಾಕು ಇರಿದ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗು ಕಾರ್ತಿಕ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ವಿದ್ಯಾರಣ್ಯಪುರ ನರಸೀಪುರದ ಜಯಶ್ರೀ ಬಾರ್​ನಲ್ಲಿ ಕುಡಿಯಲು ಬಂದಿದ್ದ ಚೇತನ್, ಕಾರ್ತಿಕ್ ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಬಾರ್ ಕ್ಯಾಷಿಯರ್ 20 ರೂಪಾಯಿ ಹೆಚ್ಚಿಗೆ ಬಿಲ್ ಹಾಕಿದ ಎಂಬ ಕಾರಣಕ್ಕೆ ಚಾಕು, ಬಾಟಲ್​ ನಿಂದ ಕ್ಯಾಷಿಯರ್ ರಂಜಿತ್ ಎಂಬಾತನ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಾಕು ಇರಿತವೂ ಆಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಮೂರು ಜನ ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular