Saturday, April 19, 2025
Google search engine

Homeಸ್ಥಳೀಯಐಟಿ ರೇಡ್‌ನಲ್ಲಿ ಸಿಕ್ಕ ಹಣ ಎಸ್‌ಎಸ್‌ಟಿ ಟ್ಯಾಕ್ಸ್‌ಗೆ ಸೇರಿದ್ದು: ಕುಮಾರಸ್ವಾಮಿ ಗಂಭೀರ ಆರೋಪ

ಐಟಿ ರೇಡ್‌ನಲ್ಲಿ ಸಿಕ್ಕ ಹಣ ಎಸ್‌ಎಸ್‌ಟಿ ಟ್ಯಾಕ್ಸ್‌ಗೆ ಸೇರಿದ್ದು: ಕುಮಾರಸ್ವಾಮಿ ಗಂಭೀರ ಆರೋಪ

ಮೈಸೂರು: ಬೆಂಗಳೂರಿನ ಐಟಿ ರೇಡ್ ನಲ್ಲಿ ಸಿಕ್ಕ ಹಣ ಎಸ್‌ಎಸ್‌ಟಿ (ಡಿ ಕೆ.ಶಿವಕುಮಾರ್, ಸುರೇಶ್ ಟ್ಯಾಕ್ಸ್) ಟ್ಯಾಕ್ಸ್‌ಗೆ ಸೇರಿದ್ದಾಗಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಕಲೆಕ್ಷನ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇಂದು ಕುಟುಂಬ ಸಮೇತ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ‘ರಾಜ್ಯದಲ್ಲಿ ಕೃಷಿ ವಲಯ ಸೇರಿದಂತೆ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಾಡಿನ ಜನತೆಗೆ ತಾಯಿಯ ಆಶಿರ್ವಾದ ಸಿಗಲಿ ಎಂಬುದು ನನ್ನ ಪ್ರಾರ್ಥನೆ’ ಎಂದರು.

ರಾಜ್ಯದಲ್ಲಿ ಈ ಹಿಂದೆ ವೈಎಸ್‌ಟಿ ಟ್ಯಾಕ್ಸ್ ಆರಂಭವಾಗಿತ್ತು, ಇದೀಗ ಅದಾದ ನಂತರ ಎಸ್‌ಎಸ್‌ಟಿ ಟ್ಯಾಕ್ಸ್ ಎಂಬ ಹೊಸ ಕಲೆಕ್ಷನ್ ಆರಂಭವಾಗಿದೆ. ಬೆಂಗಳೂರಿನ ಅಂಬಿಕಾಪತಿ ಮನೆಯ ಐಟಿ ರೇಡ್‌ನಲ್ಲಿ ಸಿಕ್ಕ ಹಣ ಎಸ್‌ಎಸ್‌ಟಿ ಟ್ಯಾಕ್ಸ್‌ಗೆ ಸೇರಿದ್ದಾಗಿದ್ದು, ಸಂತೋಷ್ ಮನೆಯಲ್ಲಿ ಸಿಕ್ಕಿದ್ದು ವೈಎಸ್‌ಟಿ ಟ್ಯಾಕ್ಸ್ ಹಣ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರಾಮಾಣಿಕತೆ ತೋರಬೇಕು. ಭ್ರಷ್ಟಾಚಾರ ಮಾಡಿ ದೇವರ ಮುಂದೆ ಕೈ ಮುಗಿದರೆ ದೇವಿ ಕ್ಷಮಿಸೋದಿಲ್ಲ. ಲೂಟಿ ಮಾಡುವವರು ತಿಹಾರ್ ಜೈಲಿಗೆ ಹೋಗುವುದು ತಪ್ಪುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಮಾಡಲು ಇಲಾಖೆಗಳು ಪೈಪೋಟಿಗೆ ಬಿದ್ದಿವೆ. ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಈಗ ಹಣ ಪತ್ತೆಯಾಗಿರುವುದಕ್ಕಿಂತ ಸಾಕ್ಷಿ ಬೇಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಹೆಚ್ಚಾಗಿದ್ದು, ಈ ನಡುವೆ ರೈತರಿಗೆ ವಿದ್ಯುತ್ ಅಭಾವ ಕೂಡ ಎದುರಾಗಿದೆ. ಬರಗಾಲದ ಬಗ್ಗೆ ಕೃಷಿ ಸಚಿವರ ಹೇಳಿಕೆಯನ್ನು ಗಮನಿಸಿದ್ದೇನೆ. ವಿದ್ಯುತ್ ಸಮಸ್ಯೆ ಬಗ್ಗೆ ಈಗಾಗಲೇ ನಾನು ಹೇಳಿದ್ದೆ. ಮುಂದಿನ ಎರಡು ತಿಂಗಳು ಇನ್ನೂ ದುಸ್ತರ ಪರಿಸ್ಥಿತಿ ಬರಲಿದೆ. ರೈತರ ಬಗ್ಗೆ ಸರ್ಕಾರಕ್ಕೆ ಚಿಂತೆ ಇಲ್ಲ. ಇವರು ಬರೀ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುತ್ತಾರೆ. ದೇವೇಗೌಡರು, ಕುಮಾರಸ್ವಾಮಿ ಈ ಬಗ್ಗೆ ಕುಳಿತು ತೀರ್ಮಾನ ಮಾಡುತ್ತಾರೆ. ಇದು ಅವರಿಗೆ ಬಿಟ್ಟ ವಿಷಯ. ರಾಜ್ಯದ ಜನತೆಗೆ ತಾಯಿ ಒಳ್ಳೆಯದು ಮಾಡಲಿ. ಮಳೆ ಬೆಳೆ ಚೆನ್ನಾಗಿ ಆಗಲಿ ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿ ಮುನ್ನಡೆದರು.

RELATED ARTICLES
- Advertisment -
Google search engine

Most Popular