Saturday, April 19, 2025
Google search engine

Homeರಾಜ್ಯಸುದ್ದಿಜಾಲಸಹಕಾರ ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಸದಸ್ಯರುಗಳ ಪಾತ್ರ ಪ್ರಮುಖವಾದದು: ಟಿ.ರಾಮೇಗೌಡ

ಸಹಕಾರ ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಸದಸ್ಯರುಗಳ ಪಾತ್ರ ಪ್ರಮುಖವಾದದು: ಟಿ.ರಾಮೇಗೌಡ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಸಹಕಾರ ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಸದಸ್ಯರುಗಳ ಪಾತ್ರ ಪ್ರಮುಖವಾದದು ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ರಾಮೇಗೌಡ ಹೇಳಿದರು.

ಸಾಲಿಗ್ರಾಮ ಪಟ್ಟಣದ ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಒಬ್ಬನಿಗಾಗಿ ಒಬ್ಬನು ಎಲ್ಲರಿಗಾಗಿ ಎಂಬ ಸಹಕಾರ ತತ್ವದ ಅಡಿಯಲ್ಲಿ ಸರ್ವರು ತಮ್ಮ ಕರ್ತವ್ಯವನ್ನು ನಿರ್ವಹಿಸುವುದರ ಮೂಲಕ ಸರ್ವರ ಏಳಿಗೆಗೆ ಕಾರಣಕರ್ತರಾಗಬೇಕೆಂದು ಹೇಳಿದರು. ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯೂ ಕಳೆದ ಐದು ವರ್ಷಗಳ ಹಿಂದೆ ಸ್ಥಾಪನೆಗೊಂಡು ಉತ್ತಮವಾದ ಕಾರ್ಯವನ್ನು ಮಾಡುವ ಮೂಲಕ ಈ ಭಾಗದ ಸಾರ್ವಜನಿಕರ ನಂಬಿಕೆ ವಿಶ್ವಾಸವನ್ನು ಗಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು – ಕೊಡಗು ಸೌಹಾರ್ದ ಜಿಲ್ಲಾ ಸಂಯೋಜಕ ಎಸ್.ಆರ್.ಸುರೇಶ್ ಮಾತನಾಡಿ ಸೊಸೈಟಿಯ ಸದಸ್ಯರುಗಳು ಹಾಗೂ ಸಾರ್ವಜನಿಕರು ಖಾಸಗಿ ಸಹಭಾಗಿತ್ವದ ಕಡೆಗಳಲ್ಲಿ ತಮ್ಮ ಹಣಕಾಸಿನ ವ್ಯವಹಾರ ಮಾಡುವ ಬದಲು ಸಹಕಾರ ಸಂಸ್ಥೆಗಳಲ್ಲಿ ನಡೆಸುವ ಮೂಲಕ ತಮ್ಮ ಅಭಿವೃದ್ಧಿಯ ಜೊತೆಗೆ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಸರ್ವರೂ ಕೈಜೋಡಿಸಬೇಕು ಎಂದರು.

ಗ್ರಾಮೀಣ ನಿಧಿ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಉತ್ತಮ ಆಡಳಿತ ವ್ಯವಸ್ಥೆ ಮಾಡುವ ಮೂಲಕ ಸಾಲಿಗ್ರಾಮದ ಪ್ರಧಾನ ಕಚೇರಿಯ ಜೊತೆಗೆ ಕೆ.ಆರ್.ನಗರ ಪಟ್ಟಣದಲ್ಲಿ ತನ್ನ ಶಾಖೆಯನ್ನು ತೆರೆದಿದೆ ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಸೌಹಾರ್ದ ಸಂಘಗಳನ್ನು ಸ್ಥಾಪಿಸಿ ಆ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಲು ಪ್ರಮುಖರುಗಳು ಮುಂದಾಗಬೇಕು ಎಂದು ಕರೆ ನೀಡಿದರು.

ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು ಕೇವಲ ಹಣಕಾಸಿನ ವ್ಯವಹಾರವನ್ನು ಮಾಡದೆ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವುದು ಓಳ್ಳೆಯ ಬೆಳವಣಿಗೆಯಾಗಿದ್ದು ಈ ಸೊಸೈಟಿಯು ಇತರ ಸೌಹಾರ್ದ ಸಹಕಾರ ಸಂಘಗಳಿಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸೊಸೈಟಿಯ ಸದಸ್ಯರುಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಕೆ.ಆರ್.ಶ್ಯಾಮಸುಂದರ್, ಉಪಾಧ್ಯಕ್ಷೆ ನೇತ್ರಾವತಿ ಸುರೇಶ್, ನಿರ್ದೇಶಕರುಗಳಾದ ಎಂ.ಎಸ್.ನರಸಿಂಹ, ಕುಮಾರ್, ಶಶಿಕುಮಾರ್, ಶಿವರಾಜ್ ಕುಮಾರ್, ಮಹದೇವ, ರಾಜೇಶ್, ಮಂಜುಳಾ ಕನಕರಾಜ್, ಭಾಗ್ಯ ಗುರುರಾಜ್, ರೇಣುಕೇಶ್, ಮಂಜುನಾಥ್, ಶ್ರುತಿ ಶ್ರೀನಿವಾಸ್ ಗೌಡ, ಸಿಇಓ ಮಮತಾ ಜಯಕೃಷ್ಣ, ಕಂಪ್ಯೂಟರ್ ಆಪರೇಟರ್ ಸಿಂಧುಮಂಜುನಾಥ್, ಸದಸ್ಯರುಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular