Tuesday, April 8, 2025
Google search engine

Homeಅಪರಾಧಕಾನೂನುನಟ ದರ್ಶನ್ ರ ಮಧ್ಯಂತರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಅರ್ಜಿ

ನಟ ದರ್ಶನ್ ರ ಮಧ್ಯಂತರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಅರ್ಜಿ

ಬೆಂಗಳೂರು: ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಇದ್ದಾರೆ. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಇದ್ದರೆ ಪಾಶ್ವವಾಯು ಆಗುವ ಸಾಧ್ಯತೆ ಇದೆ ಎಂದು ವೈದ್ಯರು ಆತಂಕ ಹೊರಹಾಕಿದ ರಿಪೋರ್ಟ್ ನೀಡಿ ಜಾಮೀನು ಪಡೆಯಲಾಗಿತ್ತು. ಅವರಿಗೆ ಅಲ್ಲಿ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದೆ. ಶೀಘ್ರವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಒಂದು ಕಡೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಅವರಿಗೆ ಜಾಮೀನು ನೀಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ವಾದ-ವಿವಾದ ನಡೆಯುತ್ತಿದೆ. ಹೀಗಿರುವಾಗಲೇ ಅವರ ಮಧ್ಯಂತರ ಜಾಮೀನು ರದ್ದತಿ ಕೋರಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಶುಕ್ರವಾರ (ಡಿಸೆಂಬರ್ 6) ಅಥವಾ ಸೋಮವಾರ (ಡಿಸೆಂಬರ್ 9) ಅರ್ಜಿ ವಿಚಾರಣೆಗೆ ಬರೋ ಸಾಧ್ಯತೆ ಇದೆ.

ದರ್ಶನ್ ಅವರಿಗೆ ತೀವ್ರ ರಕ್ತದೊತ್ತಡ ಇರುವ ಕಾರಣದಿಂದ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ ಎಂದು ದರ್ಶನ್ ಪರ ವಕೀಲರು ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ಅವರನ್ನು ಚಿಕಿತ್ಸೆಗೆ ಸಿದ್ಧಮಾಡುತ್ತಿರುವುದಾಗಿ ಕೋರ್ಟ್​ನಲ್ಲಿ ಮಾಹಿತಿ ನೀಡಲಾಗಿದೆ.

RELATED ARTICLES
- Advertisment -
Google search engine

Most Popular