Monday, June 9, 2025
Google search engine

Homeಸ್ಥಳೀಯಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಸುಳಿವು

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಸುಳಿವು

ಮೈಸೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ. ಇದೀಗ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಕೆಲ ಹಣ ದುರುಪಯೋಗ ಆಗಿದೆ. ಆ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೂ ನಿಗಮಕ್ಕೆ ಒಂದು ಪೈಸೆಯೂ ಕಡಿಮೆ ಮಾಡಲ್ಲ. ನನ್ನ ಬಳಿಯೇ ಈಗ ಆ ಖಾತೆ ಇದೆ, ಹಣ ಮೀಸಲಿಡುತ್ತೇನೆ. ಶಾಸಕ ಬಿ.ನಾಗೇಂದ್ರ ಮೇಲೂ ಸುಳ್ಳು ಕೇಸ್ ಹಾಕಿಸಿದ್ದಾರೆ. ನಾಗೇಂದ್ರಗೆ ಈಗ ಬೇಲ್ ಸಿಕ್ಕಿದೆ, ಹೊರಗಡೆ ಬಂದಿದ್ದಾರೆ. ಚುನಾವಣೆ ಆದ್ಮೇಲೆ ಒಂದು ತೀರ್ಮಾನ ಮಾಡಬೇಕಿದೆ ಎಂದು ಹೇಳಿಕೆ ನೀಡುವ ಮೂಲಕ ಮತ್ತೆ ಸಚಿವ ಸ್ಥಾನ ನೀಡುವ ಸುಳಿವು ನೀಡಿದ್ದಾರೆ.

ಹೆಚ್‌ಡಿ.ಕೋಟೆಯಲ್ಲಿಂದು ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರು ಸಿಎಂ ಮುಂದೆ ಬೇಡಿಕೆ ಇಟ್ಟರು. ಈ ವೇಳೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಎಲ್ಲಿ ಖಾಲಿ ಇದೆ ಕೊಡುತ್ತೇನೆ ಎಂದು ಸುಳ್ಳು ಹೇಳಲು ಸಾಧ್ಯವಿಲ್ಲ. ಈಗ ಹೇಳಿ ಆ ನಂತರ ಮಾತಿಗೆ ತಪ್ಪಲು ಆಗುತ್ತಾ ನಾಗೇಂದ್ರ ಅವರಿಗೆ ಕೊಡಬೇಕು. ಕೊಡುತ್ತೇನೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular