Saturday, April 19, 2025
Google search engine

Homeರಾಜ್ಯಸುದ್ದಿಜಾಲಬಿತ್ತನೆ ಬೀಜ, ಗೊಬ್ಬರದ ಕೊರತೆ ಇಲ್ಲ : ಸಚಿವ ಚೆಲುವರಾಯಸ್ವಾಮಿ

ಬಿತ್ತನೆ ಬೀಜ, ಗೊಬ್ಬರದ ಕೊರತೆ ಇಲ್ಲ : ಸಚಿವ ಚೆಲುವರಾಯಸ್ವಾಮಿ

ಮಂಡ್ಯ : ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗುತ್ತಿದ್ದು, ಸದ್ಯ ಈಗ ಮೊದಲ ಬೆಳೆ ಬೆಳೆಯಲು ಯಾವುದೇ ತೊಂದರೆ ಇಲ್ಲ. ನಾಳೆಯಿಂದ ಬಿತ್ತನೆ ಬೀಜ ವಿತರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಇಲ್ಲ ಎಂದು ನಾಗಮಂಗಲದಲ್ಲಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು.

ಮಂಡ್ಯದ ನಾಗಮಂಗಲದಲ್ಲಿಂದು ಮಾತನಾಡಿದ ಅವರು ತಮಿಳುನಾಡಿಗೆ ನೀರು ಬಿಡಲು ಸಿಡಬ್ಲ್ಯೂಆರ್‌ಸಿ ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಸಿಡಬ್ಲ್ಯೂಆರ್‌ಸಿ ಶಿಫಾರಸ್ಸನ್ನು ಪ್ರಶ್ನಿಸಿ, ಸಿಡಬ್ಲ್ಯೂಎಂಎ ಮುಂದೆ ಮೇಲ್ಮನವಿ ಹೋಗಲು ತೀರ್ಮಾನಿಸಿದ್ದೇವೆ. ಈಗ ಕಬಿನಿ ಜಲಾಶಯದಿಂದ ೩೦,೦೦೦ ಕ್ಯೂ ಸೇಕ್ ನೀರು ಹೋಗುತ್ತಿದೆ.

ಕೆಆರ್‌ಎಸ್ ಅಣೆಕಟ್ಟಿಗೆ ೩೫,೦೦೦ ಕ್ಯೂಸೆಕ್ ಒಳಹರಿವು ಇದೆ ಕಬಿನಿಯಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಈಗ ಬಿಡುವ ಪ್ರಶ್ನೆ ಇಲ್ಲ. ಕೆ ಆರ್ ಎಸ್ ಡ್ಯಾಮ್ ನಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ಮಳೆ ಮುಂದುವರೆದರೆ ಕೆಆರ್‌ಎಸ್ ಡ್ಯಾಮ್ ಭರ್ತಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular