Sunday, April 20, 2025
Google search engine

Homeರಾಜಕೀಯಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಪಡಿಸಿದ ಸಂಸದೆ ಸುಮಲತಾ ಅಂಬರೀಶ್, ಮಂಡ್ಯದಿಂದಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೆ ಮುಗುಳ್ನಕ್ಕಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಜೆಡಿಎಸ್‌ ‌ಗೆ ಮಂಡ್ಯ ಕ್ಷೇತ್ರ ಕೊಡುವ ವಿಚಾರವಾಗಿ ಮಾತನಾಡಿ, ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ ಎಂದರು.

ನನಗೆ ವಿಶ್ವಾಸ ಇದೆ, ಮಂಡ್ಯ ಬಿಜೆಪಿಗೆ ಸಿಗಲಿದೆ. ನಾನು ನನ್ನ ಟಿಕೆಟ್‌ ಗಾಗಿ ಹೋರಾಟ ಮಾಡ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ. ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ. ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗ್ತಿತ್ತು. ಜೆಡಿಎಸ್‌ ನಾಯಕರು ಏನಾದರೂ ಹೇಳಬಹುದು ಆದರೆ ಅಧಿಕೃತವಾಗಬೇಕು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತ ಅಲ್ಲ. ನನ್ನ ಸ್ಪರ್ಧೆ ಖಚಿತ ಎಂದರು.

ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ. ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಅನ್ನೋ ಬಗ್ಗೆ ವಿವರ ಕೇಳಬೇಕು ಎಂದು ಹೇಳಿದರು.

ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದಿನ ಸಭೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಬೇಬಿಬೆಟ್ಟ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಕುರಿತು ಮಾತನಾಡಿ, ಟ್ರಯಲ್ ಬ್ಲಾಸ್ಟ್‌ ಗೆ ಕೋರ್ಟ್ ಆದೇಶ ಇದೆ. ಆದರೆ ವಾಸ್ತವ ಮಾಹಿತಿಯನ್ನು ಅಧಿಕಾರಗಳಿಗೆ ತಿಳಿಸಿದ್ದೇನೆ. ಟ್ರಯಲ್ ಬ್ಲಾಸ್ಟ್‌ ಗೆ ರೈತರ ವಿರೋಧ ಇದೆ‌. ರೈತರ ಮನವಿಯಲ್ಲಿ ನ್ಯಾಯ ಇದೆ, ನಾನು ಅವರೊಂದಿಗಿದ್ದೇನೆ. ಟ್ರಯಲ್ ಬ್ಲಾಸ್ಟ್ ನಡೆಸಿದರೆ ಅನುಕೂಲಕಕ್ಕಿಂತ ಅನಾನುಕೂಲ ಜಾಸ್ತಿ. ಟ್ರಯಲ್ ಬ್ಲಾಸ್ಟ್‌ಗೆ  ಸ್ಟೇ ಆರ್ಡರ್ ತರಲು ರೈತ ಸಂಘ ಮುಂದಾಗಿದೆ. ಜಿಲ್ಲಾಡಳಿತಕ್ಕೆ ಮೇಲ್ಮನವಿ ಸಲ್ಲಿಸುವ ಅವಕಾಶ ಇಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular