Saturday, April 19, 2025
Google search engine

Homeರಾಜಕೀಯಹೊಸ ವರ್ಷದಲ್ಲಿ ಮೂರು ದಿನಕ್ಕೆ ಮೂರು ನಾಮ, ಇನ್ನೂ ಬಾಕಿಯಿದೆ: ಛಲವಾದಿ ನಾರಾಯಣಸ್ವಾಮಿ ಕಿಡಿ

ಹೊಸ ವರ್ಷದಲ್ಲಿ ಮೂರು ದಿನಕ್ಕೆ ಮೂರು ನಾಮ, ಇನ್ನೂ ಬಾಕಿಯಿದೆ: ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಹೊಸ ವರ್ಷದಲ್ಲಿ ಮೂರು ದಿನಕ್ಕೆ ಮೂರು ನಾಮ ಹಾಕಿದ್ದಾರೆ. ಇನ್ನೂ ಬಾಕಿಯಿದೆ ಎಂದು ಕಾಂಗ್ರೆಸ್ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಆರ್ ಅಶೋಕ್ ನೇತೃತ್ವದಲ್ಲಿ ಮೆಜೆಸ್ಟಿಕ್‌ನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೆಣ್ಮಕ್ಕಳಿಗೆ ಫ್ರೀ ಕೊಟ್ಟು, ಗಂಡಸರಿಗೆ ಬರೆ ಕೊಡುತ್ತಿದ್ದೀರಿ. ಹಾಲು, ವಿದ್ಯುತ್, ನೋಂದಣಿ ದರ ಏರಿಕೆ ಮಾಡಿ ತಲೆ ಬೋಳಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದೆ. ದಿನ ದೂಡಲು ಹಣವೂ ಬೇಕು. ಆದ್ದರಿಂದ ಬರೆ ಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿ ಸಾಲ ಮಾಡಿಲ್ಲ. ಕಾಂಗ್ರೆಸ್‌ನವರು ಸುಳ್ಳು ಹೇಳಬೇಡಿ. ದಿವಾಳಿ ಮಾಡಿರೋದು ಕಾಂಗ್ರೆಸ್ ಎಂದು ಹರಿಹಾಯ್ದರು.

ಅಧಿಕಾರಿಗಳು ಸೂಸೈಡ್ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳಿಗೆ ನೀವು ಸೂಸೈಡ್ ಭಾಗ್ಯ ಕೊಡುತ್ತಿದ್ದೀರಿ. ಈ ದರ್ಬಾರ್ ಜನರಿಗೆ ಸಾಕಾಗಿದೆ ಎಂದು ಗುಡುಗಿದರು.

RELATED ARTICLES
- Advertisment -
Google search engine

Most Popular