Monday, April 21, 2025
Google search engine

Homeಅಪರಾಧಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋಗಿ ಮೂವರು ಸಾವು

ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋಗಿ ಮೂವರು ಸಾವು

ಮಂಡ್ಯ: ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ಮುಳುಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿಯ ವೇಣುಗೋಪಾಲ ಸ್ವಾಮಿ ದೇವಾಲಯದ ಬಳಿ ಇಂದು ನಡೆದಿದೆ. ಹರೀಶ್(೩೨), ನಂಜುಂಡ, ಜ್ಯೋತಿ (೧೮) ನೀರಿನಲ್ಲಿ ಮುಳುಗಿ ಮೃತಪಟ್ಟವರು. ಜ್ಯೋತಿ ಹಾಗೂ ನಂಜುಂಡ ಎಂಬುವರ ಶವ ಹೊರತೆಗೆಯಲಾಗಿದೆ. ಹರೀಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಮೈಸೂರಿನಿಂದ ಪ್ರವಾಸಕ್ಕೆಂದು ಎನ್‌ಜಿಒ ಕಡೆಯಿಂದ ೨೦ಕ್ಕೂ ಹೆಚ್ಚು ಜನರು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕೆಆರ್‌ಎಸ್ ಹಿನ್ನೀರಿನಲ್ಲಿ ಈಜುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸದ್ಯ ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಹರೀಶ್ ಮೃತದೇಹಕ್ಕಾಗಿ ಅಗ್ನಿ ಶಾಮಕ ದಳದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular