Friday, April 18, 2025
Google search engine

Homeಅಪರಾಧಕಾನೂನುತಿರುಪತಿ ಲಡ್ಡು ಪ್ರಕರಣ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಸಚಿವ ಎಂ.ಬಿ ಪಾಟೀಲ್ ಆಗ್ರಹ

ತಿರುಪತಿ ಲಡ್ಡು ಪ್ರಕರಣ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಸಚಿವ ಎಂ.ಬಿ ಪಾಟೀಲ್ ಆಗ್ರಹ

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದು, ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಾರ್ಮಿಕವಾಗಿ ಪಾವಿತ್ರ?ಯ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ ಎಂದರು.

ಮೊದಲೆಲ್ಲ ಕೆಎಂಎಫ್ ತಿರುಪತಿಗೆ ತುಪ್ಪ ಪೂರೈಸುತ್ತಿತ್ತು. ಆಗ ಕಲಬೆರಕೆ ಇತ್ಯಾದಿ ಏನೂ ಇರಲಿಲ್ಲ. ಈ ಬಗ್ಗೆ ನಾನು ಕೆಎಂಎಫ್ ಅಧ್ಯಕ್ಷರೊಂದಿಗೆ ಕೂಡ ಮಾತನಾಡಿದ್ದೇನೆ. ಯಾರೇ ಆದರೂ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು. ಈ ಪ್ರಕರಣ ತನಿಖೆಯಾಗಲಿ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular