Saturday, April 19, 2025
Google search engine

Homeರಾಜ್ಯಸುದ್ದಿಜಾಲಉಡುಪಿಯಲ್ಲಿ ಪ್ರವಾಸಿ ಬೋಟ್‌ ಪಲ್ಟಿ; ರೈಡರ್‌ ಸಮುದ್ರಪಾಲು

ಉಡುಪಿಯಲ್ಲಿ ಪ್ರವಾಸಿ ಬೋಟ್‌ ಪಲ್ಟಿ; ರೈಡರ್‌ ಸಮುದ್ರಪಾಲು

ಉಡುಪಿ: ಜಿಲ್ಲೆಯ ತ್ರಾಸಿ ಬೀಚ್‌ನಲ್ಲಿ ಬೋಟ್‌ ಪಲ್ಟಿಯಾಗಿ ರೈಡರ್‌ ಕಣ್ಮರೆಯಾಗಿರುವ ಘಟನೆ ವರದಿಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದ್ದು, ಕಣ್ಮರೆಯಾಗಿರುವ ರೈಡರ್‌ಗಾಗಿ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿದೆ. ಇನ್ನು ನಾಪತ್ತೆಯಾದ ರೈಡರ್‌ನನ್ನು ರವಿದಾಸ್‌ ಎಂದು ಗುರುತಿಸಲಾಗಿದೆ.

ನಡೆದಿದ್ದೇನು?

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್‌ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.

ಮುರುಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular