Saturday, April 19, 2025
Google search engine

HomeUncategorizedರಾಷ್ಟ್ರೀಯಉತ್ತರಾಖಂಡ: ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ

ಉತ್ತರಾಖಂಡ: ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ

ಗೋಪೇಶ್ವರ: ಅನಾರೋಗ್ಯದ ಕಾರಣದಿಂದ ದೇವಸ್ಥಾನಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಡೋಲು ಬಾರಿಸಲು ಬಾರದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ಹಳ್ಳಿಯೊಂದರ ದಲಿತ ಕುಟುಂಬಗಳನ್ನು ಬಹಿಷ್ಕರಿಸಿದ್ದಾರೆ.

ಭಾರತ- ಚೀನಾ ಗಡಿಯ ಸಮೀಪವಿರುವ ನಿತಿ ಕಣಿವೆಯಲ್ಲಿರುವ ಸುಭಾಯ್ ಗ್ರಾಮದ ಸ್ಥಳೀಯ ಪಂಚಾಯತ್ ಭಾನುವಾರ ಬಹಿಷ್ಕಾರವನ್ನು ಘೋಷಿಸಿದೆ.

ಸುಭಾಯ್ ಗ್ರಾಮದಲ್ಲಿ ಸುಮಾರು ಅರ್ಧ ಡಜನ್ ಪರಿಶಿಷ್ಟ ಜಾತಿಯ ಕುಟುಂಬಗಳಿವೆ. ಅವರು ಆ ಗ್ರಾಮದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬಗಳಲ್ಲಿ ಹಲವು ತಲೆಮಾರುಗಳಿಂದ ಡೋಲು ಬಾರಿಸುತ್ತಿದ್ದಾರೆ.

ಆದರೆ, ಒಬ್ಬ ಪುಷ್ಕರ್ ಲಾಲ್ ಅನಾರೋಗ್ಯದ ಕಾರಣದಿಂದಾಗಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಡೋಲು ಬಾರಿಸಲು ಬಂದಿರಲಿಲ್ಲ. ಇದರಿಂದ ಸ್ಥಳೀಯ ಪಂಚಾಯತ್ ಇಡೀ ದಲಿತ ಸಮುದಾಯವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಆದೇಶಿಸಿದೆ. ಪಂಚಾಯತ್ ಸದಸ್ಯರೊಬ್ಬರು ಬಹಿಷ್ಕಾರವನ್ನು ಘೋಷಿಸುವುದು ಮತ್ತು ಆದೇಶವನ್ನು ಪಾಲಿಸದಿದ್ದರೆ ಇದೇ ರೀತಿಯ ಪರಿಣಾಮಗಳನ್ನು ಗ್ರಾಮಸ್ಥರಿಗೆ ಬೆದರಿಕೆ ಹಾಕುವುದು ವೀಡಿಯೊದಲ್ಲಿ ಸೆರೆಯಾಗಿದೆ.

ಪಂಚಾಯತ್ ಆದೇಶದ ಪ್ರಕಾರ, ಎಸ್‌ಸಿ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸದಂತೆ, ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸಲು, ವಾಹನಗಳಲ್ಲಿ ಪ್ರಯಾಣಿಸಲು ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.

ಸಂತ್ರಸ್ತೆಯ ಕುಟುಂಬಗಳು ಜೋಶಿಮಠ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಮಕೃಷ್ಣ ಖಂಡ್ವಾಲ್ ಮತ್ತು ಯಶವೀರ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳು ಈ ಆದೇಶದ ರೂವಾರಿಗಳು ಎಂದು ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular