Saturday, April 19, 2025
Google search engine

Homeರಾಜ್ಯವಾಲ್ಮೀಕಿ ಹಗರಣ: ಇಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ಬಗ್ಗೆ ಕೋರ್ಟ್ ನಿರ್ಧಾರ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಹಗರಣ: ಇಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ಬಗ್ಗೆ ಕೋರ್ಟ್ ನಿರ್ಧಾರ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಇಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ಬಗ್ಗೆ ಕೋರ್ಟ್ ನಿರ್ಧಾರ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿ ವಾಲ್ಮೀಕಿ ಹಗರಣದ ಕೇಸ್‌ನಲ್ಲಿ ಇಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ವಿಚಾರ ಮತ್ತು ಮಾಜಿ ಸಚಿವ ನಾಗೇಂದ್ರ ಮೇಲೆ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅವರು ತನಿಖೆ ಮಾಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ವಿಶೇಷ ತನಿಖಾ ತಂಡ ತನಿಖೆ ಮಾಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಅಂತಿಮವಾಗಿ ನಿರ್ಧಾರವನ್ನು ಕೋರ್ಟ್ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಕೋರ್ಟ್ ಏನು ತೀರ್ಮಾನ ಮಾಡುತ್ತದೆ ಎಂದು ನೋಡೋಣ. ತನಿಖೆ ಸಮಯದಲ್ಲಿ ದಾಖಲಾತಿಗಳನ್ನು ಸಂಗ್ರಹ ಮಾಡಿ ಚಾರ್ಜ್‌ಶೀಟ್ ನಲ್ಲಿ ಹಾಕಿದ್ದಾರೆ. ಅದು ಸರಿಯೋ? ತಪ್ಪೋ? ಎಂದು ಕೋರ್ಟ್ ತಿಳಿಸುತ್ತದೆ. ಅಂತಿಮವಾಗಿ ಕೋರ್ಟ್ ಶಿಕ್ಷೆ ಏನು ನೀಡಬೇಕು ಎಂದು ತೀರ್ಮಾನ ನೀಡುತ್ತದೆ ಎಂದರು.

RELATED ARTICLES
- Advertisment -
Google search engine

Most Popular