Friday, April 11, 2025
Google search engine

Homeಅಪರಾಧವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣ

ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣ

ರಾಯಚೂರು: ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು , ಓರ್ವ ಚಾಲಕ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು.

14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್‌ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular