ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರದ್ದು ಆತ್ಮಹತ್ಯೆ ಅಲ್ಲ. ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗದ ವಿಚಾರಕ್ಕೆ ಕಿಡಿಕಾರಿದರು. ಅಧಿಕಾರದ ದರ್ಪದಿಂದ ಕಾಂಗ್ತೆಸ್ನವ್ರು ಹೇಳಿಕೆ ಕೊಡ್ತಿದ್ದಾರೆ. ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ ಎಂದರು.
ಇದರ ಹಿಂದೆ ಯಾರೆಲ್ಲ ದುಷ್ಟ ಶಕ್ತಿಗಳು ಇವೆ ಅಂತ ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಕಾನೂನು ಹೋರಾಟ ಮಾಡುತ್ತೇವೆ. ಇವತ್ತು ಕಾನೂನು ತಜ್ಞರೊಂದಿಗೆ ಮುಂದಿನ ಹೋರಾಟ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದರು.