Monday, April 21, 2025
Google search engine

Homeರಾಜ್ಯಕೇಂದ್ರದಿಂದ ಅನುದಾನ ತಂದು, ನಮ್ಮ ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ: ಸಚಿವ ಜಿ.ಪರಮೇಶ್ವರ್

ಕೇಂದ್ರದಿಂದ ಅನುದಾನ ತಂದು, ನಮ್ಮ ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ ಅನುದಾನ ಕೊಡ್ತಿಲ್ಲ. ಶೀಘ್ರದಲ್ಲೇ ಕೇಂದ್ರದಿಂದ ಅನುದಾನ ತಂದು, ನಮ್ಮ ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಗ್ಯಾರಂಟಿಗಳ ಬಗ್ಗೆ ಶಾಸಕ ಗವಿಯಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿಗಳ ಬಗ್ಗೆ ಪಕ್ಷ, ಸರ್ಕಾರ ತೀರ್ಮಾನ ಕೈಗೊಂಡಿದೆ. ಗ್ಯಾರಂಟಿ ಜಾರಿಗೆ ತರೋದಕ್ಕೆ ಕದ್ದು ಮುಚ್ಚಿ ತೀರ್ಮಾನ ಮಾಡಿಲ್ಲ. ಇದರಿಂದ ಜನ ನಮಗೆ ಮತ ಹಾಕಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದರು.

ಗ್ಯಾರಂಟಿಗಳನ್ನು ಜಾರಿ ಮಾಡೋದು ನಮ್ಮ ಕರ್ತವ್ಯ. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳಲಿ, ತಪ್ಪಿಲ್ಲ, ನಾನೂ ಕೇಳ್ತೀನಿ. ಸರ್ಕಾರ ಅನುದಾನ ಕೊಡ್ತಿದೆ. ಕಾರ್ಯಕ್ರಮಗಳು ಯಾವುದೂ ನಿಂತಿಲ್ಲ. ಹಿಂದಿನ ಸರ್ಕಾರ ಸಾಕಷ್ಟು ಬಿಲ್ ಬಾಕಿ ಉಳಿಸಿಹೋಗಿದ್ರು. ಕೇಂದ್ರವೂ ಸರಿಯಾದ ಅನುದಾನ ಕೊಡ್ತಿಲ್ಲ. ಕೇಂದ್ರದ ಅನುದಾನ ತಂದು, ನಮ್ಮ ಸಂಪನ್ಮೂಲವೂ ಹೆಚ್ಚಿಸಿಕೊಳ್ತೇವೆ ಎಂದರು.

RELATED ARTICLES
- Advertisment -
Google search engine

Most Popular