Friday, April 18, 2025
Google search engine

Homeರಾಜ್ಯನೀರಿನ ದರ ಏರಿಕೆ ಮಾಡ್ತೀವಿ, ಬಸ್ ದರ ಏರಿಕೆ ನಾವು ಎಲ್ಲಿ ಹೇಳಿದ್ದೀವಿ: ಸಿಎಂ ಪ್ರಶ್ನೆ

ನೀರಿನ ದರ ಏರಿಕೆ ಮಾಡ್ತೀವಿ, ಬಸ್ ದರ ಏರಿಕೆ ನಾವು ಎಲ್ಲಿ ಹೇಳಿದ್ದೀವಿ: ಸಿಎಂ ಪ್ರಶ್ನೆ

ಬೆಂಗಳೂರು: ಜಲಮಂಡಳಿ ನಷ್ಟದಲ್ಲಿದೆ. ಅದಕ್ಕಾಗಿ ನೀರಿನ ದರ ಏರಿಕೆ‌ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನೀರಿನ ದರ ಹೆಚ್ಚು ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ ಇನ್ನೂ ಏರಿಕೆ ಮಾಡಿಲ್ಲ. ಸುಮಾರು ವರ್ಷಗಳಿಂದ ನೀರಿನ ದರ ಏರಿಕೆ ಆಗಿಲ್ಲ. ಹಾಗಾಗಿ ನೀರಿನ ದರ ಏರಿಕೆ ಮಾಡುತ್ತಿದ್ದೇವೆ ಎಂದರು.

ಬಸ್ ದರ ಏರಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಸಿಎಂ, ಬಸ್ ದರ ಏರಿಕೆ ಬಗ್ಗೆ ನಾವು ಎಲ್ಲಿ ಹೇಳಿದ್ದೇವೆ? ನಮಗೆ ಅದು ಗೊತ್ತೇ ಇಲ್ಲ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular