Tuesday, July 7, 2026
Google search engine

Homeರಾಜ್ಯವಿಶ್ವಬ್ಯಾಂಕ್ ವರದಿ : ‘ಮೇಲ್ಮಧ್ಯಮ ಆದಾಯ’ದ ಆರ್ಥಿಕತೆ ಪಟ್ಟಿಗೆ ಕರ್ನಾಟಕ; ಕನ್ನಡಿಗರ ಪರಿಶ್ರಮಕ್ಕೆ ಸಿಕ್ಕ ಜಯ...

ವಿಶ್ವಬ್ಯಾಂಕ್ ವರದಿ : ‘ಮೇಲ್ಮಧ್ಯಮ ಆದಾಯ’ದ ಆರ್ಥಿಕತೆ ಪಟ್ಟಿಗೆ ಕರ್ನಾಟಕ; ಕನ್ನಡಿಗರ ಪರಿಶ್ರಮಕ್ಕೆ ಸಿಕ್ಕ ಜಯ ಎಂದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯ ಪ್ರಕಾರ, ಭಾರತದ ಐದು ರಾಜ್ಯಗಳು ‘ಮೇಲ್ಮಧ್ಯಮ ವರ್ಗದ ಆದಾಯ (Upper Middle-Income)’ ಹೊಂದಿರುವ ಆರ್ಥಿಕತೆಗಳ ಮಿತಿಯನ್ನು (ಕಟ್ ಆಫ್) ಯಶಸ್ವಿಯಾಗಿ ದಾಟಿದ್ದು, ಈ ಪೈಕಿ ಕರ್ನಾಟಕವು ಮುಂಚೂಣಿಯಲ್ಲಿದೆ. ದೆಹಲಿ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕವು $5,579 ತಲಾ ಆದಾಯದೊಂದಿಗೆ ದ್ವಿತೀಯ ಸ್ಥಾನ ಪಡೆದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ.

ಈ ಮಹತ್ವದ ಸಾಧನೆಯ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ಮೂಲಕ ಸಂತಸ ಹಂಚಿಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆಪಡುವಂತಹ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ.
ಕನ್ನಡಿಗರ ಪರಿಶ್ರಮ, ಗ್ಯಾರಂಟಿ ಯೋಜನೆಗಳ ಕೊಡುಗೆ

ರಾಜ್ಯದ ಈ ಹೆಮ್ಮೆಯ ಸಾಧನೆಯು ನಮ್ಮ ಉದ್ಯಮಿಗಳು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನತೆಯ ಕಠಿಣ ಪರಿಶ್ರಮ, ಅನ್ವೇಷಣಾ ಮನೋಭಾವ ಹಾಗೂ ಕ್ರಿಯಾಶೀಲತೆಗೆ ಸಂದ ಜಯವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಇದೇ ವೇಳೆ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿರುವ ಅವರು

"ನಮ್ಮ ಐದು ಗ್ಯಾರಂಟಿ ಯೋಜನೆಗಳು ಕೇವಲ ಕಲ್ಯಾಣ ಕಾರ್ಯಕ್ರಮಗಳಲ್ಲ; ಅವು ಜನರ ಮೇಲಿನ ಹೂಡಿಕೆಗಳಾಗಿವೆ. ಕುಟುಂಬಗಳ ಆದಾಯವನ್ನು ಬಲಪಡಿಸುವ, ಜೀವನೋಪಾಯವನ್ನು ಭದ್ರಪಡಿಸುವ ಮೂಲಕ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ವಿಸ್ತರಿಸುವ ಮೂಲಕ, ಒಳಗೊಳ್ಳುವಿಕೆಯ ಬೆಳವಣಿಗೆಯೇ (Inclusive Growth) ಸುಸ್ಥಿರ ಆರ್ಥಿಕ ಪ್ರಗತಿಗೆ ಅತ್ಯಂತ ಬಲವಾದ ಬುನಾದಿ ಎಂಬುದನ್ನು ನಾವು ಸಾಬೀತುಪಡಿಸಿದ್ದೇವೆ" ಎಂದು ಪ್ರತಿಪಾದಿಸಿದ್ದಾರೆ

ಜಾಗತಿಕ ಗುಣಮಟ್ಟ ತಲುಪಿದ ಭಾರತದ ಟಾಪ್ 5 ರಾಜ್ಯಗಳು

ವಿಶ್ವಬ್ಯಾಂಕ್‌ನ ನಿಯಮಾವಳಿಗಳ ಅನ್ವಯ ತಲಾ ಆದಾಯವು $1,175 ರಿಂದ $4,635 ರಷ್ಟಿದ್ದರೆ ಅದನ್ನು ಮಧ್ಯಮ ಆದಾಯದ ಮಿತಿ ಎನ್ನಲಾಗುತ್ತದೆ. ಭಾರತದ ಒಟ್ಟಾರೆ ಆರ್ಥಿಕತೆಗಿಂತ ಭಿನ್ನವಾಗಿ ಈ ಕೆಳಗಿನ ಐದು ರಾಜ್ಯಗಳು ಈ ಮಿತಿಯನ್ನು ಮೀರಿ ಮೇಲ್ಮಧ್ಯಮ ಆದಾಯದ ಜಾಗತಿಕ ಗುಣಮಟ್ಟವನ್ನು ತಲುಪಿವೆ.

ರಾಜ್ಯ        ತಲಾ ಆದಾಯ (ಡಾಲರ್‌ಗಳಲ್ಲಿ)      ಸ್ಥಾನ
ದೆಹಲಿ             $6,217                            ಮೊದಲ ಸ್ಥಾನ
ಕರ್ನಾಟಕ         $5,579                            ಎರಡನೇ ಸ್ಥಾನ
ತೆಲಂಗಾಣ          $5,407                          ಮೂರನೇ ಸ್ಥಾನ
ತಮಿಳುನಾಡು       $5,329                         ನಾಲ್ಕನೇ ಸ್ಥಾನ
ಗುಜರಾತ್           $4,734                           ಐದನೇ ಸ್ಥಾನ

ಇನ್ನುಳಿದಂತೆ ಮಹಾರಾಷ್ಟ್ರ, ಹರಿಯಾಣ ಮತ್ತು ಕೇರಳ ರಾಜ್ಯಗಳು ಅತ್ಯಲ್ಪ ಅಂತರದಲ್ಲಿ ಈ ಮೈಲಿಗಲ್ಲನ್ನು ಮಿಸ್ ಮಾಡಿಕೊಂಡಿವೆ. ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ಭಾರತದ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಬೆಳವಣಿಗೆಯ ಲಾಭಗಳು ಪ್ರತಿ ಮನೆಗೂ ತಲುಪುವಂತೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular