Thursday, April 17, 2025
Google search engine

Homeಸ್ಥಳೀಯರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಯೋಗೀಶ್ ಪ್ರಥಮ

ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಯೋಗೀಶ್ ಪ್ರಥಮ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ನಡೆದ “ಅಂತರ ವಿಶ್ವವಿದ್ಯಾನಿಲಯಗಳ ರಾಜ್ಯ ಮಟ್ಟದ”  ಚರ್ಚಾ ಸ್ಪರ್ಧೆಯಲ್ಲಿ ಬಿ.ಎ.ಯೋಗೀಶ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಹಾರಾಜ ಕಾಲೇಜಿನ ತೃತೀಯ ಬಿ.ಎ ವಿಧ್ಯಾರ್ಥಿಯಾಗಿರುವ ಯೋಗೇಶ್ ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಾಧ್ಯಮ ಹಬ್ಬ (ಜರ್ನೋತ್ರಿ 24)ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಾರಾಜ ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಸಿಬ್ಬಂದಿ ವರ್ಗ ಈ ವಿದ್ಯಾರ್ಥಿಯ ಸಾಧನೆಗೆ ಅಭಿನಂದನೆ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪತ್ರಕರ್ತ ರಮಾಕಾಂತ್ ಆರ್ಯಾನ್, ವಿಕ್ರಾಂತ್ ಗೌಡ ಎಚ್.ಎಂ. ಫೌಂಡೇ ಶನ್‌ ಅಧ್ಯಕ್ಷ ಮುತ್ತುರಾಜ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೊ.ಎಂ.ಎಸ್.ಸಪ್ನಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular