ಮಂಗಳೂರು: ಬಂಟ್ವಾಳದ ಮುಸ್ಲಿಂ ಯುವಕನ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಖಲಂದರ್ ಶಾಫಿ ಮಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೇ 27ರಂದು ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹಾಗೂ ಶಾಫಿ ಮೇಲೆ ದೀಪಕ್ ತಂಡ ತಲ್ವಾರ್ ದಾಳಿ ನಡೆಸಿತ್ತು.
ಘಟನೆಯಲ್ಲಿ ರಹ್ಮಾನ್ ಸಾವನ್ನಪ್ಪಿದರೆ, ಶಾಫಿ ಓಡಿಹೋಗಿ ಪ್ರಾಣ ಉಳಿಸಿಕೊಂಡರು. ಗೆಳೆಯರು ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದ್ದರು. ಕೆಲ ದಿನಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆದ ಶಾಫಿ ಈಗ ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದಾರೆ.