ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭದ್ರತೆ ಹೆಚ್ಚಳವಾಗಿದ್ದು, ಕಳೆದ ಮೂರು ದಿನದಿಂದ ಖರ್ಗೆಗೆ ಝೆಡ್ ಪ್ಲಸ್ ಸೆಕ್ಯುರಿಟಿ ನೀಡಲಾಗಿದೆ. ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ಪಿಎಫ್ Z+ ಸಕ್ಯೂರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ ೮ ಜನ ಸಿಆರ್ಪಿಎಫ್ ಗನ್ ಮ್ಯಾನ್ ಗಳ ನಿಯೋಜಿಸಲಾಗಿದೆ.
ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಆ ಕಾರಣಕ್ಕೆ ಕಳೆದ ಮೂರು ದಿನದಿಂದ ಅವರಿಗೆ ಝೆಡ್ ಪ್ಲಸ್ ಸೆಕ್ಯುರಿಟಿ ನೀಡಲಾಗಿದೆ.